ನಿಶ್ಚಯವಾಗಿಯೂ ರಾತ್ರಿ ಮತ್ತು ಹಗಲು ತಲುಪುವ ಎಲ್ಲಾ ಸ್ಥಳಗಳಿಗೂ ಈ ವಿಷಯವು ತಲುಪಲಿದೆ. ಅಲ್ಲಾಹು ಪಟ್ಟಣದಲ್ಲಿ ಅಥವಾ ಮರುಭೂಮಿಯಲ್ಲಿರುವ ಯಾವುದೇ ಮನೆಗೂ ಈ ಧರ್ಮವು ಪ್ರವೇಶವಾಗುವಂತೆ ಮಾಡದೆ ಬಿಡಲಾರ
Choose an available translation of this Hadeeth
Hadeeth text
ತಮೀಮುದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ರಾತ್ರಿ ಮತ್ತು ಹಗಲು ತಲುಪುವ ಎಲ್ಲಾ ಸ್ಥಳಗಳಿಗೂ ಈ ವಿಷಯವು ತಲುಪಲಿದೆ. ಅಲ್ಲಾಹು ಪಟ್ಟಣದಲ್ಲಿ ಅಥವಾ ಮರುಭೂಮಿಯಲ್ಲಿರುವ ಯಾವುದೇ ಮನೆಗೂ ಈ ಧರ್ಮವು ಪ್ರವೇಶವಾಗುವಂತೆ ಮಾಡದೆ ಬಿಡಲಾರ. ಅದು ಗೌರವಾನ್ವಿತರಿಗೆ ಗೌರವವನ್ನು ಅಥವಾ ಅವಮಾನಿತರಿಗೆ ಅವಮಾನವನ್ನು ತರಲಿದೆ. ಅದು ಅಲ್ಲಾಹು ಇಸ್ಲಾಂ ಧರ್ಮದ ಮೂಲಕ ನೀಡುವ ಗೌರವ ಮತ್ತು ಸತ್ಯನಿಷೇಧದ ಮೂಲಕ ನೀಡುವ ಅವಮಾನವಾಗಿದೆ." ತಮೀಮುದ್ದಾರಿ ಹೇಳುತ್ತಿದ್ದರು: ನಾನು ಅದನ್ನು ನನ್ನ ಕುಟುಂಬದವರಲ್ಲೇ ಗುರುತಿಸಿದ್ದೇನೆ. ಅವರಲ್ಲಿ ಇಸ್ಲಾಂ ಸ್ವೀಕರಿಸಿದವರೆಲ್ಲರಿಗೂ ಒಳಿತು, ಘನತೆ ಮತ್ತು ಗೌರವಗಳು ಉಂಟಾಗಿವೆ. ಅವರಲ್ಲಿ ಸತ್ಯನಿಷೇಧಿಗಳಾದ ಎಲ್ಲರಿಗೂ ಅವಮಾನ, ತಿರಸ್ಕಾರ ಮತ್ತು ತೆರಿಗೆ ಉಂಟಾಗಿವೆ.
Explanation
ನಂತರ ಸಹಾಬಿವರ್ಯರಾದ ತಮೀಮುದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದ ಈ ವಿಷಯವನ್ನು ಅವರು ವಿಶೇಷವಾಗಿ ತಮ್ಮ ಕುಟುಂಬದವರಲ್ಲೇ ಗುರುತಿಸಿದ್ದಾರೆ. ಏಕೆಂದರೆ, ಅವರಲ್ಲಿ ಇಸ್ಲಾಂ ಸ್ವೀಕರಿಸಿದವರೆಲ್ಲರೂ ಘನತೆ-ಗೌರವಗಳನ್ನು ಪಡೆದಿದ್ದಾರೆ. ಅವರಲ್ಲಿ ನಿಷೇಧಿಸಿದವರೆಲ್ಲರೂ ತಮ್ಮ ಸಂಪತ್ತಿನಿಂದ ಮುಸ್ಲಿಮರಿಗೆ ತೆರಿಗೆ ಪಾವತಿ ಮಾಡಬೇಕಾಗಿ ಬಂದಿರುವುದರ ಹೊರತಾಗಿಯೂ ಅವಮಾನ ಮತ್ತು ತಿರಸ್ಕಾರವನ್ನು ಪಡೆದಿದ್ದಾರೆ.
Benefits
ಗೌರವವಿರುವುದು ಇಸ್ಲಾಂ ಮತ್ತು ಮುಸ್ಲಿಮರಿಗೆ. ಅವಮಾನವಿರುವುದು ಸತ್ಯನಿಷೇಧ ಮತ್ತು ಸತ್ಯನಿಷೇಧಿಗಳಿಗೆ.
ಇದರಲ್ಲಿ ಪ್ರವಾದಿತ್ವದ ಪುರಾವೆ ಮತ್ತು ಅದರ ಒಂದು ಚಿಹ್ನೆಯಿದೆ. ಅದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದಂತೆಯೇ ಅದು ಸಂಭವಿಸಿದೆ.
Attribution
Categories
Share hadeeth
Sharing options · 0 Total shares

