ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್ಲ. ಇವರಲ್ಲೊಬ್ಬನು ಮೂತ್ರದ ಮಾಲಿನ್ಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರಲಿಲ್ಲ. ಇನ್ನೊಬ್ಬನು ಚಾಡಿ ಮಾತುಗಳೊಂದಿಗೆ ನಡೆದಾಡುತ್ತಿದ್ದ
Choose an available translation of this Hadeeth
Hadeeth text
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸಮಾಧಿಗಳ ಮೂಲಕ ಹಾದು ಹೋಗುತ್ತಿದ್ದಾಗ ಹೇಳಿದರು: "ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್ಲ. ಇವರಲ್ಲೊಬ್ಬನು ಮೂತ್ರದ ಮಾಲಿನ್ಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರಲಿಲ್ಲ. ಇನ್ನೊಬ್ಬನು ಚಾಡಿ ಮಾತುಗಳೊಂದಿಗೆ ನಡೆದಾಡುತ್ತಿದ್ದ." ನಂತರ ಅವರು ಖರ್ಜೂರದ ಹಸಿಕೊಂಬೆಯನ್ನು ತೆಗೆದು ಎರಡು ತುಂಡು ಮಾಡಿದರು. ನಂತರ ಒಂದೊಂದು ಸಮಾಧಿಯ ಮೇಲೆ ಒಂದೊಂದನ್ನು ನೆಟ್ಟರು. ಸಹಚರರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವೇಕೆ ಹೀಗೆ ಮಾಡಿದಿರಿ?" ಅವರು ಉತ್ತರಿಸಿದರು: "ಅವು ಒಣಗುವ ತನಕ ಅವರಿಗೆ ಶಿಕ್ಷೆಯಲ್ಲಿ ರಿಯಾಯಿತಿ ಸಿಗಬಹುದು."
Explanation
Benefits
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಾದಿತ್ವದ ಚಿಹ್ನೆಯನ್ನು ಪ್ರಕಟಪಡಿಸುವುದಕ್ಕಾಗಿ ಅಲ್ಲಾಹು ಸಮಾಧಿ ಶಿಕ್ಷೆಯಂತಹ ಕೆಲವು ಅದೃಶ್ಯ ವಿಷಯಗಳನ್ನು ತೋರಿಸಿಕೊಡುತ್ತಾನೆ.
ಖರ್ಜೂರ ಮರದ ಕೊಂಬೆಯನ್ನು ತುಂಡು ಮಾಡಿ ಸಮಾಧಿಗಳ ಮೇಲೆ ನೆಟ್ಟ ಈ ಪ್ರಕ್ರಿಯೆಯು ವಿಶೇಷವಾಗಿ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಾತ್ರ ಸೀಮಿತವಾಗಿದೆ. ಏಕೆಂದರೆ ಅಲ್ಲಾಹು ಸಮಾಧಿಯಲ್ಲಿರುವವರ ಸ್ಥಿತಿಯನ್ನು ಅವರಿಗೆ ತಿಳಿಸಿದ್ದನು. ಇದಕ್ಕೆ ಹೋಲಿಕೆ (ಕಿಯಾಸ್) ಮಾಡಿಕೊಂಡು ಬೇರೆ ಸಮಾಧಿಗಳ ಮೇಲೆ ಗಿಡಗಳನ್ನು ನೆಡಬಾರದು. ಏಕೆಂದರೆ, ಆ ಸಮಾಧಿಗಳಲ್ಲಿರುವವರ ಸ್ಥಿತಿ ಏನೆಂದು ಯಾರಿಗೂ ತಿಳಿದಿಲ್ಲ.
Attribution
Categories
Share hadeeth
Sharing options · 0 Total shares

