'ನೀನು ಇಚ್ಛಿಸಿದರೆ ತಾಳ್ಮೆಯಿಂದಿರು. ನಿನಗೆ ಸ್ವರ್ಗವಿದೆ. ಇನ್ನು ನೀನು ಇಚ್ಛಿಸಿದರೆ ಅಲ್ಲಾಹು ನಿನ್ನನ್ನು ಗುಣಪಡಿಸುವಂತೆ ನಾನು ಪ್ರಾರ್ಥಿಸುವೆನು'
Choose an available translation of this Hadeeth
Hadeeth text
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಇಬ್ನ್ ಅಬ್ಬಾಸ್) ಅತಾಅ್ ಇಬ್ನ್ ಅಬೀ ರಬಾಹ್ ರಿಗೆ ಹೇಳಿದರು: "ನಾನು ನಿನಗೆ ಸ್ವರ್ಗವಾಸಿಗಳಲ್ಲಿ ಸೇರಿದ ಒಬ್ಬ ಮಹಿಳೆಯನ್ನು ತೋರಿಸಲೇ?" ನಾನು ಹೇಳಿದೆನು: "ಖಂಡಿತವಾಗಿ (ತೋರಿಸಿ)". ಅವರು ಹೇಳಿದರು: "ಈ ಕಪ್ಪು ಮಹಿಳೆ. ಆಕೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: 'ನಾನು ಮೂರ್ಛೆ ರೋಗದಿಂದ (ಅಥವಾ ಅಪಸ್ಮಾರದಿಂದ) ಬಳಲುತ್ತಿದ್ದೇನೆ ಮತ್ತು (ಆಗ) ನನ್ನ ದೇಹವು ಅನಾವರಣಗೊಳ್ಳುತ್ತದೆ. ಆದ್ದರಿಂದ, ನನಗಾಗಿ ಅಲ್ಲಾಹನಲ್ಲಿ ಪ್ರಾರ್ಥಿಸಿರಿ'. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: 'ನೀನು ಇಚ್ಛಿಸಿದರೆ ತಾಳ್ಮೆಯಿಂದಿರು. ನಿನಗೆ ಸ್ವರ್ಗವಿದೆ. ಇನ್ನು ನೀನು ಇಚ್ಛಿಸಿದರೆ ಅಲ್ಲಾಹು ನಿನ್ನನ್ನು ಗುಣಪಡಿಸುವಂತೆ ನಾನು ಪ್ರಾರ್ಥಿಸುವೆನು'. ಆಕೆ ಹೇಳಿದರು: 'ನಾನು ತಾಳ್ಮೆಯಿಂದಿರುತ್ತೇನೆ'. ನಂತರ ಆಕೆ ಹೇಳಿದರು: 'ಆದರೆ ನಾನು (ಮೂರ್ಛೆ ಹೋದಾಗ) ಅನಾವರಣಗೊಳ್ಳುತ್ತೇನೆ, ಆದ್ದರಿಂದ ನಾನು ಅನಾವರಣಗೊಳ್ಳದಂತೆ ಅಲ್ಲಾಹನಲ್ಲಿ ಪ್ರಾರ್ಥಿಸಿರಿ'. ಆಗ ಅವರು ಆಕೆಗಾಗಿ ಪ್ರಾರ್ಥಿಸಿದರು".
Explanation
Benefits
ಇಮಾಮ್ ನವವಿ ಹೇಳುತ್ತಾರೆ: ಮೂರ್ಛೆ ರೋಗಕ್ಕೆ ಪರಿಪೂರ್ಣವಾದ ಪ್ರತಿಫಲ ನೀಡಲಾಗುತ್ತದೆ ಎಂಬುದಕ್ಕೆ ಈ ಹದೀಸಿನಲ್ಲಿ ಪುರಾವೆಯಿದೆ.
ಸಹಾಬಿ ಮಹಿಳೆಯರು ಪಾವಿತ್ರ್ಯ ಮತ್ತು ಸಂಕೋಚಕ್ಕೆ ನೀಡುತ್ತಿದ್ದ ಪರಿಗಣನೆಯನ್ನು, ಮತ್ತು ದೇಹವನ್ನು ಮುಚ್ಚಿಕೊಳ್ಳುವುದರ ಬಗ್ಗೆ ಅವರಿಗಿದ್ದ ಕಾಳಜಿಯನ್ನು ತಿಳಿಸಲಾಗಿದೆ. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ. ಈ ಮಹಿಳೆ ತನ್ನ ರೋಗಕ್ಕಿಂತ ಹೆಚ್ಚಾಗಿ ತನ್ನ ದೇಹದ ಯಾವುದೇ ಭಾಗವು ಅನಾವರಣಗೊಳ್ಳಬಹುದೆಂದು ಹೆಚ್ಚು ಭಯಪಡುತ್ತಿದ್ದರು.
ಇಬ್ನ್ ಹಜರ್ ಹೇಳುತ್ತಾರೆ: ತನಗೆ ಶಕ್ತಿಯಿದೆ ಎಂದು ತಿಳಿದಿರುವ ಮತ್ತು ಕಷ್ಟವನ್ನು ಸಹಿಸಿಕೊಳ್ಳಲು ಸಾಧ್ಯವಿರುವ ವ್ಯಕ್ತಿಗೆ, ರಿಯಾಯಿತಿಯನ್ನು ಸ್ವೀಕರಿಸುವುದಕ್ಕಿಂತ ಕಷ್ಟಕರವಾದ ಮಾರ್ಗವನ್ನು (ತಾಳ್ಮೆಯನ್ನು) ಆರಿಸಿಕೊಳ್ಳುವುದು ಉತ್ತಮವಾಗಿದೆ.
ಇಬ್ನ್ ಹಜರ್ ಹೇಳುತ್ತಾರೆ: ಎಲ್ಲಾ ರೋಗಗಳಿಗೆ ಔಷಧಿಗಳ ಮೂಲಕ ಚಿಕಿತ್ಸೆ ಪಡೆಯುವುದಕ್ಕಿಂತ ಪ್ರಾರ್ಥನೆ (ದುಆ) ಮತ್ತು ಅಲ್ಲಾಹನ ಮೊರೆ ಹೋಗುವುದರ ಮೂಲಕ ಚಿಕಿತ್ಸೆ ಪಡೆಯುವುದು ಹೆಚ್ಚು ಪರಿಣಾಮಕಾರಿ ಮತ್ತು ಪ್ರಯೋಜನಕಾರಿಯಾಗಿದೆ ಎಂದು ಈ ಹದೀಸಿನಲ್ಲಿ ಸೂಚನೆಯಿದೆ. ಅದರ ಪರಿಣಾಮ ಹಾಗೂ ದೇಹವು ಅದಕ್ಕೆ ಸ್ಪಂದಿಸುವುದು ದೈಹಿಕ ಔಷಧಿಗಳ ಪರಿಣಾಮಕ್ಕಿಂತ ದೊಡ್ಡದಾಗಿದೆ. ಆದರೆ, ಇದು ಎರಡು ವಿಷಯಗಳಿಂದ ಮಾತ್ರ ಯಶಸ್ವಿಯಾಗುತ್ತದೆ: ಒಂದನೆಯದು ರೋಗಿಯ ಕಡೆಯಿಂದ – ಅಂದರೆ ಅವನ ಉದ್ದೇಶದ ಪ್ರಾಮಾಣಿಕತೆಯನ್ನು ಅವಲಂಬಿಸಿಕೊಂಡಿದೆ. ಎರಡನೆಯದು ಚಿಕಿತ್ಸೆ ನೀಡುವವನ ಕಡೆಯಿಂದ – ಅಂದರೆ, ಅವನ ಮನಸ್ಸಿನ ಏಕಾಗ್ರತೆಯ ಶಕ್ತಿಯನ್ನು ಮತ್ತು ದೇವಭಯ (ತಖ್ವಾ) ಹಾಗೂ ಅಲ್ಲಾಹನ ಮೇಲಿನ ಭರವಸೆಯಿಂದ (ತವಕ್ಕುಲ್) ಅವನ ಹೃದಯದ ಶಕ್ತಿಯನ್ನು ಅವಲಂಬಿಸಿಕೊಂಡಿದೆ. ಹೆಚ್ಚು ಬಲ್ಲವನು ಅಲ್ಲಾಹು.
ಇಬ್ನ್ ಹಜರ್ ಹೇಳುತ್ತಾರೆ: ವೈದ್ಯಕೀಯ ಚಿಕಿತ್ಸೆಯನ್ನು ತೊರೆಯಲು ಅನುಮತಿಯಿದೆ ಎಂಬುದಕ್ಕೆ ಈ ಹದೀಸಿನಲ್ಲಿ ಪುರಾವೆಯಿದೆ.
Attribution
Categories
Share hadeeth
Sharing options · 0 Total shares

