ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ
Choose an available translation of this Hadeeth
Hadeeth text
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ."
Explanation
Benefits
ಯಾರು ಪ್ರವಾದಿಯವರಲ್ಲಿ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿಶ್ವಾಸವಿಡುವುದಿಲ್ಲವೋ ಅವರಿಗೆ ಆ ವಿಶ್ವಾಸವು ಪ್ರಯೋಜನಪಡುವುದಿಲ್ಲ. ಅವರು ಇತರೆಲ್ಲಾ ಪ್ರವಾದಿಗಳಲ್ಲಿ ವಿಶ್ವಾಸವಿಡುತ್ತೇವೆಂದು ವಾದಿಸಿದರೂ ಸಹ.
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಗ್ಗೆ ಕೇಳದ ಮತ್ತು ಇಸ್ಲಾಮಿನ ಸಂದೇಶವು ತಲುಪದ ಜನರು ತಪ್ಪಿತಸ್ಥರಾಗುವುದಿಲ್ಲ. ಪರಲೋಕದಲ್ಲಿ ಅವರ ವಿಷಯವನ್ನು ಅಲ್ಲಾಹನ ಇಚ್ಛೆಗೆ ಬಿಟ್ಟುಬಿಡಲಾಗುತ್ತದೆ.
ಸಾವಿಗೆ ಕೆಲವೇ ಕ್ಷಣಗಳ ಮೊದಲು ಇಸ್ಲಾಂ ಸ್ವೀಕರಿಸಿದರೂ ಅದರಿಂದ ಪ್ರಯೋಜನವಾಗುತ್ತದೆ. ಅದು ತೀವ್ರ ಅನಾರೋಗ್ಯದ ಸ್ಥಿತಿಯಲ್ಲಾದರೂ ಸಹ. ಆದರೆ ಆತ್ಮವು ಗಂಟಲಿಗೆ ತಲುಪಿದರೆ ಪ್ರಯೋಜನವಾಗುವುದಿಲ್ಲ.
ಯಹೂದಿಗಳು ಮತ್ತು ಕ್ರೈಸ್ತರು ಸೇರಿದಂತೆ ಸತ್ಯನಿಷೇಧಿಗಳ ಧರ್ಮವನ್ನು ಸರಿಯೆಂದು ಹೇಳುವುದು ಸತ್ಯನಿಷೇಧವಾಗಿದೆ.
ಇಲ್ಲಿ ಯಹೂದಿಗಳ ಮತ್ತು ಕ್ರೈಸ್ತರ ಹೆಸರೆತ್ತಿ ಹೇಳಿರುವುದರಿಂದ ತಿಳಿದುಬರುವುದೇನೆಂದರೆ, ದೈವಿಕ ಗ್ರಂಥಗಳನ್ನು ಹೊಂದಿರುವ ಯಹೂದಿಗಳು ಮತ್ತು ಕ್ರೈಸ್ತರು ಇಸ್ಲಾಂ ಧರ್ಮವನ್ನು ಸ್ವೀಕರಿಸಿ ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನುಸರಿಸುವುದು ಕಡ್ಡಾಯವಾಗಿರುವಾಗ, ದೈವಿಕ ಗ್ರಂಥಗಳನ್ನು ಹೊಂದಿರದ ಇತರ ಧರ್ಮದವರು ಅದಕ್ಕೆ ಇನ್ನೂ ಹೆಚ್ಚು ಅರ್ಹರಾಗಿದ್ದಾರೆ.
Attribution
Categories
Share hadeeth
Sharing options · 0 Total shares

