ಅದು ಎಪ್ಪತ್ತು ವರ್ಷಗಳ ಹಿಂದೆ ನರಕಕ್ಕೆ ಎಸೆಯಲಾದ ಒಂದು ಕಲ್ಲು. ಅದು ನರಕದೊಳಗೆ ಬೀಳುತ್ತಾ ಇದೀಗ ಅದರ ತಳಭಾಗವನ್ನು ತಲುಪಿದೆ
Choose an available translation of this Hadeeth
Hadeeth text
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಒಂದು ಸದ್ದು ಕೇಳಿಸಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಇದೇನೆಂದು ನಿಮಗೆ ತಿಳಿದಿದೆಯೇ?" ನಾವು ಹೇಳಿದೆವು: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "ಅದು ಎಪ್ಪತ್ತು ವರ್ಷಗಳ ಹಿಂದೆ ನರಕಕ್ಕೆ ಎಸೆಯಲಾದ ಒಂದು ಕಲ್ಲು. ಅದು ನರಕದೊಳಗೆ ಬೀಳುತ್ತಾ ಇದೀಗ ಅದರ ತಳಭಾಗವನ್ನು ತಲುಪಿದೆ."
Explanation
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಕೇಳಿದ ಈ ಸದ್ದು ಎಪ್ಪತ್ತು ವರ್ಷಗಳ ಹಿಂದೆ ನರಕದ ಮೇಲ್ಭಾಗದಿಂದ ಅದಕ್ಕೆ ಎಸೆಯಲಾದ ಒಂದು ಕಲ್ಲಾಗಿದೆ. ಅದು ನರಕದೊಳಗೆ ಬೀಳುತ್ತಾ, ಇದೀಗ ನೀವು ಅದರ ಸದ್ದು ಕೇಳುವಾಗ ನರಕದ ತಳಭಾಗವನ್ನು ತಲುಪಿದೆ."
Benefits
ಮನುಷ್ಯನಿಗೆ ಜ್ಞಾನವಿಲ್ಲದ ವಿಷಯಗಳನ್ನು ಅಲ್ಲಾಹನಿಗೆ ವಹಿಸಿಕೊಡುವುದು ಅಪೇಕ್ಷಣೀಯವಾಗಿದೆ.
ಸಭಿಕರು ಹೆಚ್ಚು ಪರಿಣಾಮಕಾರಿಯಾಗಿ ಅರ್ಥಮಾಡಿಕೊಳ್ಳಲು ಶಿಕ್ಷಕರು ವಿವರಣೆಗೆ ಮುನ್ನ ಜನರ ಆಸಕ್ತಿ ಮತ್ತು ಗಮನವನ್ನು ಸೆಳೆಯಬೇಕಾಗಿದೆ.
Attribution
Categories
Share hadeeth
Sharing options · 0 Total shares

