ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು
Choose an available translation of this Hadeeth
Hadeeth text
ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾಹಕರಾಗಿದ್ದಾರೆ, ಯೇಸು (ಅವರ ಮೇಲೆ ಶಾಂತಿಯಿರಲಿ) ಅಲ್ಲಾಹನ ದಾಸರು, ಸಂದೇಶವಾಹಕರು ಮತ್ತು ಅಲ್ಲಾಹು ಮರ್ಯಮರಿಗೆ ಹಾಕಿಕೊಟ್ಟ ಅವನ ವಚನ ಮತ್ತು ಅವನ ವತಿಯ ಆತ್ಮವಾಗಿದ್ದಾರೆ, ಸ್ವರ್ಗ ಸತ್ಯವಾಗಿದೆ, ನರಕ ಸತ್ಯವಾಗಿದೆ ಎಂದು ಯಾರಾದರೂ ಸಾಕ್ಷ್ಯ ವಹಿಸಿದರೆ, ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು."
Explanation
Benefits
ಯೇಸು ಮತ್ತು ಮುಹಮ್ಮದ್ (ಅವರಿಬ್ಬರ ಮೇಲೂ ಶಾಂತಿಯಿರಲಿ) ಇಬ್ಬರೂ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರಾಗಿದ್ದಾರೆಂದು ಹೇಳಲಾಗಿದೆ. ಆದ್ದರಿಂದ ಅವರಿಬ್ಬರೂ ಪ್ರವಾದಿಗಳಾಗಿದ್ದು ಅವರನ್ನು ನಿಷೇಧಿಸಬಾರದು ಮತ್ತು ಅವರಿಬ್ಬರೂ ಮನುಷ್ಯರಾಗಿದ್ದು ಅವರನ್ನು ಆರಾಧಿಸಬಾರದು.
ತೌಹೀದ್ (ಏಕದೇವತ್ವ) ನ ಶ್ರೇಷ್ಠತೆಯನ್ನು ಮತ್ತು ಅದು ಪಾಪಗಳನ್ನು ಅಳಿಸುತ್ತದೆಯೆಂದು ತಿಳಿಸಲಾಗಿದೆ. ಅದೇ ರೀತಿ, ಸತ್ಯವಿಶ್ವಾಸಿಗಳ ಅಂತಿಮ ವಾಸಸ್ಥಳವು ಸ್ವರ್ಗವಾಗಿದೆಯೆಂದು ತಿಳಿಸಲಾಗಿದೆ. ಅವರಿಂದ ಕೆಲವು ಪಾಪಗಳು ಸಂಭವಿಸಿದ್ದರೂ ಸಹ.
Attribution
Categories
Share hadeeth
Sharing options · 0 Total shares

