“ಆಡಳಿತಗಾರರು ಬರುವರು. ಆಗ ಅವರು ಮಾಡುವ ಕೆಲವು ಕಾರ್ಯಗಳನ್ನು ನೀವು ಗುರುತಿಸುವಿರಿ ಮತ್ತು ಕೆಲವು ಕಾರ್ಯಗಳನ್ನು ಅಲ್ಲಗಳೆಯುವಿರಿ. ಯಾರು (ಅವರ ಕೆಡುಕುಗಳನ್ನು) ಗುರುತಿಸುತ್ತಾರೋ ಅವರು ದೋಷಮುಕ್ತರಾಗುವರು. ಯಾರು (ಅವುಗಳಿಗೆ) ಅಸಮ್ಮತಿ ಸೂಚಿಸುತ್ತಾರೋ ಅವರು ಸುರಕ್ಷಿತರಾಗುವರು. ಆದರೆ ಅವರ ಬಗ್ಗೆ ಸಂತೃಪ್ತರಾಗಿ ಅವರನ್ನು ಅನುಸರಿಸುವವರು ಇದಕ್ಕೆ ಹೊರತಾಗಿದ್ದಾರೆ
Choose an available translation of this Hadeeth
Hadeeth text
ಸತ್ಯವಿಶ್ವಾಸಿಗಳ ಮಾತೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಆಡಳಿತಗಾರರು ಬರುವರು. ಆಗ ಅವರು ಮಾಡುವ ಕೆಲವು ಕಾರ್ಯಗಳನ್ನು ನೀವು ಗುರುತಿಸುವಿರಿ ಮತ್ತು ಕೆಲವು ಕಾರ್ಯಗಳನ್ನು ಅಲ್ಲಗಳೆಯುವಿರಿ. ಯಾರು (ಅವರ ಕೆಡುಕುಗಳನ್ನು) ಗುರುತಿಸುತ್ತಾರೋ ಅವರು ದೋಷಮುಕ್ತರಾಗುವರು. ಯಾರು (ಅವುಗಳಿಗೆ) ಅಸಮ್ಮತಿ ಸೂಚಿಸುತ್ತಾರೋ ಅವರು ಸುರಕ್ಷಿತರಾಗುವರು. ಆದರೆ ಅವರ ಬಗ್ಗೆ ಸಂತೃಪ್ತರಾಗಿ ಅವರನ್ನು ಅನುಸರಿಸುವವರು ಇದಕ್ಕೆ ಹೊರತಾಗಿದ್ದಾರೆ.” ಅವರು (ಸಹಾಬಿಗಳು) ಕೇಳಿದರು: “ನಾವು ಅವರ (ಆಡಳಿತಗಾರರ) ವಿರುದ್ಧ ಯುದ್ಧ ಮಾಡಬೇಕೇ?” ಪ್ರವಾದಿಯವರು ಉತ್ತರಿಸಿದರು: “ಬೇಡ, ಅವರು ನಮಾಝ್ ನಿರ್ವಹಿಸುತ್ತಿರುವ ತನಕ.”
Explanation
ಆಗ ಸಹಾಬಿಗಳು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಇಂತಹ ಆಡಳಿತಗಾರರ ವಿರುದ್ಧ ನಾವು ಯುದ್ಧ ಮಾಡಬೇಕೇ?" ಅವರು ಉತ್ತರಿಸಿದರು: "ಬೇಡ, ಅವರು ನಮಾಝ್ ಸಂಸ್ಥಾಪಿಸುತ್ತಿರುವ ತನಕ ಅವರ ವಿರುದ್ಧ ಯುದ್ಧ ಮಾಡಬಾರದು."
Benefits
ದುಷ್ಕರ್ಮಗಳಿಗೆ ಸಂತೃಪ್ತಿ ಸೂಚಿಸಬಾರದು ಮತ್ತು ಅದರಲ್ಲಿ ಸಹಭಾಗಿಯಾಗಬಾರದು. ಬದಲಿಗೆ, ಅವುಗಳನ್ನು ವಿರೋಧಿಸುವುದು ಕಡ್ಡಾಯವಾಗಿದೆ.
ಆಡಳಿತಗಾರರು ಶರಿಯತ್ (ಧರ್ಮಶಾಸ್ತ್ರ) ಗೆ ವಿರುದ್ಧವಾದ ಸಂಗತಿಯನ್ನು ಮಾಡುವಾಗ ಅದರಲ್ಲಿ ಅವರನ್ನು ಅನುಸರಿಸಬಾರದು.
ಮುಸ್ಲಿಮ್ ಆಡಳಿತಗಾರರ ವಿರುದ್ಧ ದಂಗೆಯೇಳಬಾರದು. ಏಕೆಂದರೆ, ಅದು ಅನೇಕ ರೀತಿಯ ಹಾನಿ, ರಕ್ತಪಾತ ಮತ್ತು ಅಶಾಂತಿಗೆ ಕಾರಣವಾಗುತ್ತದೆ. ದುಷ್ಟ ಆಡಳಿತಗಾರರ ದುಷ್ಕರ್ಮಗಳನ್ನು ಸಹಿಸಿಕೊಳ್ಳುವುದು ಮತ್ತು ಅವರು ನೀಡುವ ತೊಂದರೆಗಳಿಗೆ ತಾಳ್ಮೆಯಿಂದ ಪ್ರತಿಕ್ರಿಯಿಸುವುದು ದಂಗೆಯಿಂದ ಉಂಟಾಗುವ ದುಷ್ಪರಿಣಾಮಗಳಷ್ಟು ಹಾನಿಕಾರಕವಾಗಿರುವುದಿಲ್ಲ.
ನಮಾಝ್ಗೆ ಬಹಳ ಪ್ರಾಮುಖ್ಯತೆಯಿದೆ. ಏಕೆಂದರೆ, ಅದು ಸತ್ಯನಿಷೇಧ ಮತ್ತು ಇಸ್ಲಾಮನ್ನು ಬೇರ್ಪಡಿಸುತ್ತದೆ.
Attribution
Categories
Share hadeeth
Sharing options · 0 Total shares

