افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#4193[صحيح]
HadeethEnc · 1.36.0

ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವರಿಗೆ ಸ್ವರ್ಗವು ಖಚಿತವಾಯಿತು

Available translations

Choose an available translation of this Hadeeth

01

Hadeeth text

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿ ನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವರಿಗೆ ಸ್ವರ್ಗವು ಖಚಿತವಾಯಿತು". ಇದನ್ನು ಕೇಳಿ ಅಬೂ ಸಈದ್‌ಗೆ ಆಶ್ಚರ್ಯವಾಯಿತು. ಅವರು ಹೇಳಿದರು: "ಓ ಅಲ್ಲಾಹುವಿನ ಸಂದೇಶವಾಹಕರೇ, ಇದನ್ನು ನನಗೆ ಮತ್ತೊಮ್ಮೆ ಹೇಳಿ". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹಾಗೆಯೇ ಮಾಡಿದರು (ಮತ್ತೊಮ್ಮೆ ಹೇಳಿದರು). ನಂತರ ಹೇಳಿದರು: "ಮತ್ತು ಇನ್ನೊಂದು (ವಿಷಯ) ಇದೆ. ಅದರ ಮೂಲಕ ದಾಸನನ್ನು ಸ್ವರ್ಗದಲ್ಲಿ ನೂರು ಹಂತಗಳಷ್ಟು ಎತ್ತರಿಸಲಾಗುತ್ತದೆ. ಪ್ರತಿಯೆರಡು ಹಂತಗಳ ನಡುವಿನ ಅಂತರವು ಆಕಾಶ ಮತ್ತು ಭೂಮಿಯ ನಡುವಿನ ಅಂತರದಷ್ಟಿರುತ್ತದೆ". ಅಬೂ ಸಈದ್ ಕೇಳಿದರು: "ಅದು ಯಾವುದು, ಓ ಅಲ್ಲಾಹುವಿನ ಸಂದೇಶವಾಹಕರೇ?". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು (ಶ್ರಮಿಸುವುದು/ಹೋರಾಡುವುದು), ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು".
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬೂ ಸಈದ್ ಅಲ್-ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಗೆ ತಿಳಿಸುವುದೇನೆಂದರೆ, ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು, ಅವನನ್ನು ಪರಿಪಾಲಕ, ದೇವರು, ಮಾಲೀಕ, ಒಡೆಯ ಮತ್ತು ಆಜ್ಞಾಪಕನೆಂದು ಒಪ್ಪಿ ತೃಪ್ತರಾಗುತ್ತಾರೋ, ಇಸ್ಲಾಮನ್ನು ಧರ್ಮವೆಂದು ಅದರ ಎಲ್ಲಾ ಆದೇಶ ಮತ್ತು ನಿಷೇಧಗಳನ್ನು ವಿಧೇಯತೆ ಮತ್ತು ಶರಣಾಗತಿಯೊಂದಿಗೆ ಒಪ್ಪಿಕೊಳ್ಳುತ್ತಾರೋ, ಮತ್ತು ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರನ್ನು ಪ್ರವಾದಿಯೆಂದು ಅವರು ತಂದ ಮತ್ತು ತಲುಪಿಸಿದ ಎಲ್ಲದರೊಂದಿಗೆ ಒಪ್ಪಿಕೊಳ್ಳುತ್ತಾರೋ, ಅವರಿಗೆ ಸ್ವರ್ಗವು ಸ್ಥಾಪಿತವಾಯಿತು (ಖಚಿತವಾಯಿತು). ಇದನ್ನು ಕೇಳಿ ಅಬೂ ಸಈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಗೆ ಆಶ್ಚರ್ಯವಾಯಿತು. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಇದನ್ನು ನನಗೆ ಮತ್ತೊಮ್ಮೆ ಹೇಳಿ". ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಗೆಯೇ ಮಾಡಿದರು. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮತ್ತು ನನ್ನ ಬಳಿ ಇನ್ನೊಂದು ವೈಶಿಷ್ಟ್ಯವಿದೆ. ಅದರ ಮೂಲಕ ಅಲ್ಲಾಹು ದಾಸನನ್ನು ಸ್ವರ್ಗದಲ್ಲಿ ನೂರು ಹಂತಗಳಷ್ಟು ಎತ್ತರಿಸುತ್ತಾನೆ. ಪ್ರತಿಯೆರಡು ಹಂತಗಳ ನಡುವಿನ ಅಂತರವು ಆಕಾಶ ಮತ್ತು ಭೂಮಿಯ ನಡುವಿನ ಅಂತರದಷ್ಟಿರುತ್ತದೆ." ಅಬೂ ಸಈದ್ ಕೇಳಿದರು: "ಅದು ಯಾವುದು, ಓ ಅಲ್ಲಾಹುವಿನ ಸಂದೇಶವಾಹಕರೇ?". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು, ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು".
03

Benefits

ಅಲ್ಲಾಹುವನ್ನು ರಬ್ಬ್( ಪರಿಪಾಲಕ)ನೆಂದು, ಇಸ್ಲಾಮನ್ನು ಧರ್ಮವೆಂದು ಮತ್ತು ಮುಹಮ್ಮದ್ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ರನ್ನು ಪ್ರವಾದಿಯೆಂದು ಒಪ್ಪಿ ತೃಪ್ತರಾಗುವುದು ಸ್ವರ್ಗ ಪ್ರವೇಶವನ್ನು ಖಚಿತಪಡಿಸುವ ಕಾರಣಗಳಲ್ಲಿ ಒಂದಾಗಿದೆ.
ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವ ವಿಷಯದ ಮಹತ್ವವನ್ನು ಎತ್ತಿ ತೋರಿಸಲಾಗಿದೆ.
ಸ್ವರ್ಗದಲ್ಲಿ ಮುಜಾಹಿದ್ (ಅಲ್ಲಾಹುವಿನ ಮಾರ್ಗದಲ್ಲಿ ಶ್ರಮಿಸುವವನು/ಹೋರಾಡುವವನು) ನ ಉನ್ನತ ಸ್ಥಾನವನ್ನು ತಿಳಿಸಲಾಗಿದೆ.
ಸ್ವರ್ಗದಲ್ಲಿ ಅಸಂಖ್ಯಾತ ಹಂತಗಳು ಮತ್ತು ಎಣಿಸಲಾಗದಷ್ಟು ನಿವಾಸಗಳಿವೆ. ಮುಜಾಹಿದ್‌ಗಳಿಗೆ ಅವುಗಳಲ್ಲಿ ನೂರು ಹಂತಗಳಿವೆ.
ಅಲ್ಲಾಹುವಿನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಸಹಚರರು ಒಳಿತನ್ನು, ಅದರ ದ್ವಾರಗಳನ್ನು ಮತ್ತು ಕಾರಣಗಳನ್ನು ತಿಳಿಯಲು ಹೊಂದಿದ್ದ ಪ್ರೀತಿಯನ್ನು ತಿಳಿಸಲಾಗಿದೆ.

Attribution

[رواه مسلم]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...