ಕರ್ಮಗಳು ಉದ್ದೇಶಗಳ (ನಿಯ್ಯತ್ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ
Choose an available translation of this Hadeeth
Hadeeth text
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳು ಉದ್ದೇಶದ (ನಿಯ್ಯತ್) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ. ಆದ್ದರಿಂದ ಯಾರ ಹಿಜ್ರ (ವಲಸೆ) ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಾಗಿದೆಯೋ, ಅವನ ಹಿಜ್ರವನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆಂದೇ ಪರಿಗಣಿಸಲಾಗುವುದು. ಆದರೆ ಯಾರು ಐಹಿಕ ಲಾಭವನ್ನು ಪಡೆಯಲು ಅಥವಾ ಒಬ್ಬ ಮಹಿಳೆಯನ್ನು ವಿವಾಹವಾಗಲು ಹಿಜ್ರ ಮಾಡುತ್ತಾನೋ ಅವನ ಹಿಜ್ರವನ್ನು ಅದೇ ಉದ್ದೇಶಕ್ಕೆಂದು ಪರಿಗಣಿಸಲಾಗುವುದು." ಬುಖಾರಿಯ ವರದಿಯಲ್ಲಿ ಹೀಗಿದೆ: "ಕರ್ಮಗಳು ಉದ್ದೇಶಗಳ (ನಿಯ್ಯತ್ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ."
Explanation
ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉದ್ದೇಶವು ಬಾಹ್ಯವಾಗಿ ನೋಡುವಾಗ ಒಂದೇ ರೂಪದಲ್ಲಿದ್ದರೂ ಸಹ ಅದು ಒಳಗೊಂಡಿರುವ ಪರಿಣಾಮವನ್ನು ಒಂದು ಉದಾಹರಣೆಯ ಮೂಲಕ ವಿವರಿಸುತ್ತಾರೆ. ಅವರು ವಿವರಿಸುವಂತೆ, ಒಬ್ಬ ವ್ಯಕ್ತಿ ಅಲ್ಲಾಹನ ಸಂಪ್ರೀತಿಯನ್ನು ಉದ್ದೇಶಿಸಿ ತನ್ನ ಊರನ್ನು ತೊರೆದು ವಲಸೆ (ಹಿಜ್ರ) ಹೋದರೆ ಅದು ಧಾರ್ಮಿಕ ರೂಪದಲ್ಲಿರುವ ಸ್ವೀಕಾರಯೋಗ್ಯ ವಲಸೆಯಾಗಿದ್ದು ಅವನ ಉದ್ದೇಶದ ಪ್ರಾಮಾಣಿಕತೆಯಿಂದಾಗಿ ಪ್ರತಿಫಲಾರ್ಹವಾಗುತ್ತದೆ. ಆದರೆ ಒಬ್ಬ ವ್ಯಕ್ತಿ ತನ್ನ ವಲಸೆಯ (ಹಿಜ್ರ) ಮೂಲಕ ಹಣ ಸಂಪಾದಿಸುವುದು, ಸ್ಥಾನಮಾನವನ್ನು ಪಡೆಯುವುದು, ವ್ಯಾಪಾರ ಮಾಡುವುದು, ವಿವಾಹವಾಗುವುದು ಮುಂತಾದ ಭೌತಿಕ ಲಾಭವನ್ನು ಉದ್ದೇಶಿಸಿದರೆ, ಅವನು ತನ್ನ ವಲಸೆಯ ಮೂಲಕ ಅವನು ಉದ್ದೇಶಿಸಿದ ಲಾಭವನ್ನಲ್ಲದೆ ಬೇರೇನನ್ನೂ ಪಡೆಯುವುದಿಲ್ಲ. ಹಿಜ್ರ ಮಾಡಿದ್ದಕ್ಕಾಗಿ ಅವನಿಗೆ ಯಾವುದೇ ಪ್ರತಿಫಲ ಸಿಗುವುದಿಲ್ಲ.
Benefits
ಅಲ್ಲಾಹನ ಸಾಮೀಪ್ಯ ಪಡೆಯುವುದಕ್ಕಾಗಿ ಮಾಡಲಾಗುವ ಕರ್ಮಗಳನ್ನು (ಸತ್ಕರ್ಮಗಳನ್ನು) ಅಲ್ಲಾಹನ ಸಾಮೀಪ್ಯವನ್ನು ಉದ್ದೇಶಿಸದೆ ಕೇವಲ ರೂಢಿಯಾಗಿ (ಯಾಂತ್ರಿಕವಾಗಿ) ನಿರ್ವಹಿಸಿದರೆ, ಆ ಕರ್ಮಗಳು ಪ್ರತಿಫಲಾರ್ಹವಾಗುವುದಿಲ್ಲ.
Attribution
Categories
Share hadeeth
Sharing options · 0 Total shares

