ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ
Choose an available translation of this Hadeeth
Hadeeth text
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ. ನಿನಗೆ ಪ್ರಯೋಜನಕಾರಿಯಾದ ವಿಷಯದಲ್ಲಿ ಉತ್ಸುಕನಾಗು, ಅಲ್ಲಾಹನಲ್ಲಿ ಸಹಾಯ ಬೇಡು ಮತ್ತು ಅಸಹಾಯಕನಾಗಬೇಡ. ನಿನಗೇನಾದರೂ ಸಂಭವಿಸಿದರೆ, "ಒಂದು ವೇಳೆ ನಾನು ಹೀಗೆ ಮಾಡುತ್ತಿದ್ದರೆ ಹೀಗಾಗುತ್ತಿತ್ತು" ಎಂದು ಹೇಳಬೇಡ. ಬದಲಿಗೆ, "ಇದು ಅಲ್ಲಾಹು ವಿಧಿಸಿದ್ದು; ಅವನು ಇಚ್ಛಿಸುವುದನ್ನು ಅವನು ಮಾಡುತ್ತಾನೆ" ಎಂದು ಹೇಳು. ಏಕೆಂದರೆ ‘ಒಂದು ವೇಳೆ' ಎಂಬ ಮಾತು ಶೈತಾನನು ಕಾರ್ಯೋನ್ಮುಖನಾಗಲು ಬಾಗಿಲು ತೆರೆದುಕೊಡುತ್ತದೆ."
Explanation
Benefits
ಶಕ್ತಿ ಉಪಯೋಗಿಸಿ ಕೆಲಸ ಮಾಡುವುದು ಅಪೇಕ್ಷಣೀಯವಾಗಿದೆ. ಏಕೆಂದರೆ ದೌರ್ಬಲ್ಯದಿಂದ ಪಡೆಯಲು ಸಾಧ್ಯವಾಗದ ಪ್ರಯೋಜನಗಳನ್ನು ಶಕ್ತಿಯಿಂದ ಪಡೆಯಬಹುದು.
ಮನುಷ್ಯನು ತನಗೆ ಪ್ರಯೋಜನಕಾರಿಯಾದ ವಿಷಯಗಳಲ್ಲಿ ಉತ್ಸುಕನಾಗಬೇಕು ಮತ್ತು ಪ್ರಯೋಜನಕಾರಿಯಲ್ಲದ ವಿಷಯಗಳನ್ನು ಬಿಟ್ಟುಬಿಡಬೇಕು.
ಸತ್ಯವಿಶ್ವಾಸಿ ಎಲ್ಲಾ ವಿಷಯಗಳಲ್ಲೂ ಅಲ್ಲಾಹನಿಂದ ಸಹಾಯ ಬೇಡುವುದು ಕಡ್ಡಾಯವಾಗಿದೆ. ಅವನು ಎಂದಿಗೂ ಸ್ವಯಂ ಅವಲಂಬಿತನಾಗಬಾರದು.
ದೈವಿಕ ವಿಧಿ ಮತ್ತು ಪೂರ್ವನಿರ್ಧಾರವನ್ನು ದೃಢೀಕರಿಸಲಾಗಿದೆ. ಆದರೆ ಇದು ಕಾರ್ಯಕಾರಣ ಸಂಬಂಧಗಳನ್ನು ಬಳಸುವುದನ್ನು ಮತ್ತು ಒಳಿತಿನ ವಿಷಯಗಳಿಗಾಗಿ ಪರಿಶ್ರಮಿಸುವುದನ್ನು ನಿಷೇಧಿಸುವುದಿಲ್ಲ.
ವಿಪತ್ತುಗಳು ಸಂಭವಿಸುವಾಗ ಸಿಟ್ಟಿನಿಂದ 'ಒಂದು ವೇಳೆ ' ಎಂಬ ಮಾತು ಹೇಳುವುದನ್ನು ನಿಷೇಧಿಸಲಾಗಿದೆ. ಅಲ್ಲಾಹನ ವಿಧಿಯನ್ನು ಮತ್ತು ಪೂರ್ವನಿರ್ಧಾರವನ್ನು ಆಕ್ಷೇಪಿಸುವುದನ್ನು ಕೂಡ ನಿಷೇಧಿಸಲಾಗಿದೆ.
Attribution
Categories
Share hadeeth
Sharing options · 0 Total shares

