ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ ಒಂದು ಪ್ರತಿಮೆಯನ್ನು ಅಳಿಸದೆ ಬಿಡಬಾರದು ಮತ್ತು ಎತ್ತರಿಸಲ್ಪಟ್ಟ ಒಂದೇ ಒಂದು ಸಮಾಧಿಯನ್ನು ನೆಲಸಮ ಮಾಡದೆ ಬಿಡಬಾರದು
Choose an available translation of this Hadeeth
Hadeeth text
ಅಬೂ ಹಯ್ಯಾಜ್ ಅಸದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲೀ ಬಿನ್ ಅಬೂ ತಾಲಿಬ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ನನ್ನೊಂದಿಗೆ ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ ಒಂದು ಪ್ರತಿಮೆಯನ್ನು ಅಳಿಸದೆ ಬಿಡಬಾರದು ಮತ್ತು ಎತ್ತರಿಸಲ್ಪಟ್ಟ ಒಂದೇ ಒಂದು ಸಮಾಧಿಯನ್ನು ನೆಲಸಮ ಮಾಡದೆ ಬಿಡಬಾರದು."
Explanation
ಅದೇ ರೀತಿ, ಎತ್ತರಿಸಿ ಕಟ್ಟಲಾಗಿರುವ ಸಮಾಧಿಯನ್ನು ನೆಲಸಮಗೊಳಿಸದೆ ಮತ್ತು ಅದರ ಮೇಲೆ ಕಟ್ಟಲಾಗಿರುವುದನ್ನು ದ್ವಂಸಗೊಳಿಸದೆ ಬಿಡಬಾರದು; ಅಥವಾ ಸಮಾಧಿಯು ಭೂಮಿಯಿಂದ ಒಂದು ಗೇಣು ಮಾತ್ರ ಎತ್ತರವಾಗಿರುವಂತೆ ಮಾಡಬೇಕು.
Benefits
ಅಧಿಕಾರವಿರುವವನು ಅಥವಾ ಸಾಮರ್ಥ್ಯವಿರುವವನು ಕೆಡುಕನ್ನು ಕೈಯಿಂದ ನಿವಾರಿಸುವುದು ಧರ್ಮನಿಯಮವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.
ಅಜ್ಞಾನಕಾಲದ ಅವಶೇಷಗಳಾದ ಚಿತ್ರಗಳು, ಪ್ರತಿಮೆಗಳು ಮತ್ತು ಸಮಾಧಿಗಳ ಮೇಲಿರುವ ಕಟ್ಟಡಗಳನ್ನು ತೊಲಗಿಸಲು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ಸಾಹ ತೋರುತ್ತಿದ್ದರೆಂದು ಈ ಹದೀಸ್ ತಿಳಿಸುತ್ತದೆ.
Attribution
Categories
Share hadeeth
Sharing options · 0 Total shares

