افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#5981[حسن]
HadeethEnc · 1.36.0

ಶಕುನ ನೋಡುವವನು, ಶಕುನ ನೋಡಿಸುವವನು, ಭವಿಷ್ಯ ನೋಡುವವನು (ಜ್ಯೋತಿಷಿ), ಭವಿಷ್ಯ ನೋಡಿಸುವವನು, ಮಾಟಮಾಡುವವನು, ಮಾಟ ಮಾಡಿಸುವವನು, ಗಂಟು ಕಟ್ಟುವವನು ಮುಂತಾದವರು ನಮ್ಮಲ್ಲಿ ಸೇರಿದವರಲ್ಲ

Available translations

Choose an available translation of this Hadeeth

01

Hadeeth text

ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶಕುನ ನೋಡುವವನು, ಶಕುನ ನೋಡಿಸುವವನು, ಭವಿಷ್ಯ ನೋಡುವವನು (ಜ್ಯೋತಿಷಿ), ಭವಿಷ್ಯ ನೋಡಿಸುವವನು, ಮಾಟಮಾಡುವವನು, ಮಾಟ ಮಾಡಿಸುವವನು, ಗಂಟು ಕಟ್ಟುವವನು ಮುಂತಾದವರು ನಮ್ಮಲ್ಲಿ ಸೇರಿದವರಲ್ಲ. ಯಾರು ಜ್ಯೋತಿಷಿಯ ಬಳಿಗೆ ಹೋಗಿ ಅವನು ಹೇಳಿದ ಮಾತಿನಲ್ಲಿ ನಂಬಿಕೆಯಿಡುತ್ತಾನೋ ಅವನು ಮುಹಮ್ಮದರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವತೀರ್ಣವಾದ ಸಂದೇಶವನ್ನು ನಿಷೇಧಿಸಿದ್ದಾನೆ."
02

Explanation

ಕೆಲವು ಕಾರ್ಯಗಳನ್ನು ಮಾಡುವವರು "ಅವರು ನಮ್ಮಲ್ಲಿ ಸೇರಿದವರಲ್ಲ" ಎಂದು ಹೇಳುವ ಮೂಲಕ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಅವು ಹೀಗಿವೆ:

ಮೊದಲನೆಯದು: ಶಕುನ ನೋಡುವವನು ಅಥವಾ ಶಕುನ ನೋಡಿಸುವವನು. ಶಕುನ ನೋಡುವುದು ಎಂದರೆ ಪ್ರಯಾಣಕ್ಕೆ ಹೊರಟಾಗ ಅಥವಾ ವ್ಯಾಪಾರ ಮುಂತಾದ ಕೆಲಸಗಳನ್ನು ಪ್ರಾರಂಭಿಸುವಾಗ ಹಕ್ಕಿಯನ್ನು ಹಾರಿಸಿ ಶುಭ ಮತ್ತು ಅಶುಭವನ್ನು ನಿರ್ಧರಿಸುವುದು. ಹಕ್ಕಿ ಬಲಗಡೆಗೆ ಹಾರಿದರೆ ಶುಭ ಸಂಕೇತವೆಂದು ಭಾವಿಸಿ ತಮ್ಮ ಕಾರ್ಯಗಳಲ್ಲಿ ಮುಂದುವರಿಯುವುದು ಮತ್ತು ಹಕ್ಕಿ ಎಡಗಡೆಗೆ ಹಾರಿದರೆ ಅಶುಭ ಸಂಕೇತವೆಂದು ಭಾವಿಸಿ ತಮ್ಮ ಕಾರ್ಯಗಳನ್ನು ಮೊಟಕುಗೊಳಿಸುವುದು. ಈ ರೀತಿ ಸ್ವಯಂ ಶಕುನ ನೋಡುವುದು ಅಥವಾ ಇತರರಿಂದ ನೋಡಿಸುವುದು ನಿಷಿದ್ಧವಾಗಿದೆ. ಹಕ್ಕಿಗಳು, ಪ್ರಾಣಿಗಳು, ಅಂಗವಿಕಲರು, ಸಂಖ್ಯೆಗಳು, ದಿನಗಳು ಮುಂತಾದ ದೃಶ್ಯ ಮತ್ತು ಶ್ರವ್ಯ ವಸ್ತುಗಳ ಮೂಲಕ ಶುಭ ಮತ್ತು ಅಶುಭವನ್ನು ನಿರ್ಧರಿಸುವುದು ವಿರೋಧಿಸಲಾದ ಅಪಶಕುನದಲ್ಲಿ ಒಳಪಡುತ್ತದೆ.

ಎರಡನೆಯದು: ಭವಿಷ್ಯ ನೋಡುವುದು ಅಥವಾ ಭವಿಷ್ಯ ನೋಡಿಸುವುದು. ಯಾರು ನಕ್ಷತ್ರ ಮುಂತಾದವುಗಳನ್ನು ಬಳಸಿ ತನಗೆ ಭವಿಷ್ಯವು ತಿಳಿದಿದೆಯೆಂದು ವಾದಿಸುತ್ತಾನೋ, ಅಥವಾ ಜ್ಯೋತಿಷಿ ಮುಂತಾದ ಭವಿಷ್ಯ ನುಡಿಯುತ್ತೇವೆಂದು ವಾದಿಸುವವರ ಬಳಿಗೆ ಹೋಗಿ ಅವರು ಹೇಳುವ ಭವಿಷ್ಯದಲ್ಲಿ ನಂಬಿಕೆಯಿಡುತ್ತಾನೋ ಅವನು ಪ್ರವಾದಿ ಮುಹಮ್ಮದರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವತೀರ್ಣವಾದ ಸಂದೇಶವನ್ನು ನಿಷೇಧಿಸಿದ್ದಾನೆ.

ಮೂರನೆಯದು: ಮಾಟ ಮಾಡುವವನು ಅಥವಾ ಮಾಟ ಮಾಡಿಸುವವನು. ಅಂದರೆ, ಇತರರಿಗೆ ಉಪಕಾರ ಅಥವಾ ತೊಂದರೆ ಮಾಡಲು ವಾಮಾಚಾರವನ್ನು ಸ್ವತಃ ಮಾಡುವವನು ಅಥವಾ ಇತರರಿಂದ ಮಾಡಿಸುವವನು; ಅಥವಾ ದಾರಕ್ಕೆ ಗಂಟು ಕಟ್ಟಿ ಅದಕ್ಕೆ ನಿಷೇಧಿಸಲಾದ ಮಂತ್ರಗಳನ್ನು ಊದಿ ವಾಮಾಚಾರ ಮಾಡುವವನು.
03

Benefits

ಅಲ್ಲಾಹನಲ್ಲಿ ಭರವಸೆಯಿಡುವುದು ಮತ್ತು ಅವನ ತೀರ್ಮಾನ ಮತ್ತು ವಿಧಿಯಲ್ಲಿ ನಂಬಿಕೆಯಿಡುವುದು ಕಡ್ಡಾಯವಾಗಿದೆ; ಹಾಗೂ ಅಪಶಕುನ, ವಾಮಾಚಾರ ಮತ್ತು ಜ್ಯೋತಿಷ್ಯಗಳಲ್ಲಿ ನಂಬಿಕೆಯಿಡುವುದು ಹಾಗೂ ಅವರೊಡನೆ ಭವಿಷ್ಯದ ಬಗ್ಗೆ ಕೇಳುವುದು ನಿಷೇಧಿಸಲಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.
ತನಗೆ ಭವಿಷ್ಯ ತಿಳಿದಿದೆಯೆಂದು ವಾದಿಸುವುದು ತೌಹೀದ್‌ಗೆ (ಏಕದೇವತ್ವಕ್ಕೆ) ವಿರುದ್ಧವಾದ ಶಿರ್ಕ್ (ಬಹುದೇವತ್ವ) ಆಗಿದೆ.
ಜ್ಯೋತಿಷಿಗಳ ಮಾತುಗಳನ್ನು ನಂಬುವುದು ಮತ್ತು ಅವರ ಬಳಿಗೆ ತೆರಳುವುದು ನಿಷೇಧಿಸಲಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ. ಹಸ್ತಸಾಮುದ್ರಿಕೆ, ಪಿಂಗಾಣಿ ಬರಹ, ರಾಶಿಫಲ ಮುಂತಾದವುಗಳನ್ನು ನಂಬುವುದು ಅಥವಾ ಕುತೂಹಲಕ್ಕಾಗಿ ಅಂತಹ ವಿಷಯಗಳನ್ನು ಓದುವುದು ಇದರಲ್ಲಿ ಒಳಪಡುತ್ತದೆ.

Attribution

[رواه البزار]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...