افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#6112[صحيح]
HadeethEnc · 1.36.0

“ಹೇಳು: ‘ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು, ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ, ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ. ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ.’”

Available translations

Choose an available translation of this Hadeeth

01

Hadeeth text

ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ಅಲೆಮಾರಿ ಅರಬ್ಬ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದನು: “ನನಗೆ ಹೇಳಲು ಕೆಲವು ಪದಗಳನ್ನು ಕಲಿಸಿರಿ.” ಅವರು ಹೇಳಿದರು, “ಹೇಳು: ‘ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು, ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ, ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ. ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ.’” ಅವನು ಹೇಳಿದನು: “ಈ ಪದಗಳೆಲ್ಲವೂ ನನ್ನ ಪರಿಪಾಲಕನಿಗೆ, ಹಾಗಾದರೆ ನನಗೇನಿದೆ?” ಅವರು ಹೇಳಿದರು, “ಹೇಳು: ‘ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನ್ನ ಮೇಲೆ ಕರುಣೆ ತೋರು, ನನಗೆ ಮಾರ್ಗದರ್ಶನ ಮಾಡು, ಮತ್ತು ನನಗೆ ಉಪಜೀವನವನ್ನು ಒದಗಿಸು.’”
02

Explanation

ಮರುಭೂಮಿಯಲ್ಲಿ ವಾಸಿಸುವ ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಪಠಿಸಲು ಯಾವುದಾದರೂ ಸ್ಮರಣೆಯನ್ನು ಕಲಿಸಿಕೊಡಲು ವಿನಂತಿಸಿದನು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹೇಳು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು." ಅವರು ಏಕದೇವವಿಶ್ವಾಸದ ಸಾಕ್ಷ್ಯದಿಂದ ಆರಂಭಿಸಿದರು. ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ ಎಂಬುದು ಅದರ ಅರ್ಥ. "ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು." ಅಂದರೆ, ಅಲ್ಲಾಹು ಎಲ್ಲಾ ವಸ್ತುಗಳಿಗಿಂತಲೂ ದೊಡ್ಡವನು ಮತ್ತು ಮಹಾನನು. "ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ." ಅಂದರೆ, ಅವನ ಗುಣಲಕ್ಷಣಗಳು, ಕ್ರಿಯೆಗಳು ಮತ್ತು ಅಸಂಖ್ಯ ಅನುಗ್ರಹಗಳಿಗಾಗಿ ಅವನಿಗೆ ಹೇರಳವಾದ ಸ್ತುತಿಗಳು. "ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ." ಅಂದರೆ, ಅವನು ಎಲ್ಲಾ ನ್ಯೂನತೆಗಳಿಂದ ಮುಕ್ತನು ಮತ್ತು ಪರಿಶುದ್ಧನಾಗಿದ್ದಾನೆ. "ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ." ಅಂದರೆ, ಅಲ್ಲಾಹನ ಸಹಾಯ ಮತ್ತು ಮಾರ್ಗದರ್ಶನವಿಲ್ಲದೆ ಒಂದು ಸ್ಥಿತಿಯಿಂದ ಇನ್ನೊಂದು ಸ್ಥಿತಿಗೆ ಪರಿವರ್ತನೆ ಹೊಂದಲು ಸಾಧ್ಯವಿಲ್ಲ. ಆಗ ಆ ವ್ಯಕ್ತಿ ಕೇಳಿದನು: "ಈ ಪದಗಳೆಲ್ಲವೂ ನನ್ನ ಪರಿಪಾಲಕನನ್ನು ಸ್ಮರಿಸಲು ಮತ್ತು ಮಹಿಮೆಪಡಿಸಲು ಇರುವುದಾಗಿವೆ. ನನ್ನ ಸ್ವಂತಕ್ಕಾಗಿ ಪ್ರಾರ್ಥಿಸಲು ಏನಿದೆ?" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹೇಳು: "ಓ ಅಲ್ಲಾಹ್! ನನ್ನನ್ನು ಕ್ಷಮಿಸು." ಪಾಪಗಳನ್ನು ಅಳಿಸಿ ಮರೆಮಾಚುವ ಮೂಲಕ. “ನನ್ನ ಮೇಲೆ ಕರುಣೆ ತೋರು.” ಧಾರ್ಮಿಕ ಮತ್ತು ಭೌತಿಕ ಲಾಭಗಳನ್ನು ಮತ್ತು ಕ್ಷೇಮಗಳನ್ನು ನನಗೆ ತಲುಪಿಸುವ ಮೂಲಕ. "ನನಗೆ ಮಾರ್ಗದರ್ಶನ ಮಾಡು." ಅತ್ಯುತ್ತಮ ಸ್ಥಿತಿಗೆ ಮತ್ತು ನೇರ ಮಾರ್ಗಕ್ಕೆ. "ನನಗೆ ಉಪಜೀವನವನ್ನು ಒದಗಿಸು." ಧರ್ಮಸಮ್ಮತವಾದ ಸಂಪತ್ತು, ಆರೋಗ್ಯ ಮತ್ತು ಎಲ್ಲಾ ಒಳಿತುಗಳು ಹಾಗೂ ಸೌಖ್ಯಗಳು.
03

Benefits

ತಹ್ಲೀಲ್ (ಲಾ ಇಲಾಹ ಇಲ್ಲಲ್ಲಾಹ್), ತಕ್ಬೀರ್ (ಅಲ್ಲಾಹು ಅಕ್ಬರ್), ತಹ್ಮೀದ್ (ಅಲ್-ಹಮ್ದುಲಿಲ್ಲಾಹ್) ಮತ್ತು ತಸ್ಬೀಹ್ (ಸುಬ್‌ಹಾನಲ್ಲಾಹ್) ಹೇಳುವ ಮೂಲಕ ಅಲ್ಲಾಹನನ್ನು ಸ್ಮರಿಸಲು ಪ್ರೋತ್ಸಾಹಿಸಲಾಗಿದೆ.
ಪ್ರಾರ್ಥಿಸುವ ಮೊದಲು ಅಲ್ಲಾಹನನ್ನು ಸ್ಮರಿಸುವುದು ಮತ್ತು ಪ್ರಶಂಸಿಸುವುದು ಅಪೇಕ್ಷಣೀಯವಾಗಿದೆ.
ಪ್ರಾರ್ಥಿಸುವಾಗ ಅತ್ಯಂತ ಶುದ್ಧವಾದ ಪ್ರಾರ್ಥನೆಗಳನ್ನು ಮತ್ತು ಇಹಲೋಕ ಮತ್ತು ಪರಲೋಕದ ಎಲ್ಲಾ ಒಳಿತುಗಳನ್ನು ಒಳಗೊಂಡಿರುವ ಸಮಗ್ರ ಪ್ರಾರ್ಥನೆಗಳನ್ನು ಪ್ರಾರ್ಥಿಸುವುದು ಅಪೇಕ್ಷಣೀಯವಾಗಿದೆ. ಇಷ್ಟವಾದ ಯಾವುದೇ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು.
ಇಹಲೋಕ ಮತ್ತು ಪರಲೋಕದಲ್ಲಿ ತನಗೆ ಪ್ರಯೋಜನವಾಗುವ ವಿಷಯಗಳನ್ನು ಕಲಿಯಲು ದಾಸನು ಉತ್ಸಾಹ ತೋರಬೇಕು.
ಕ್ಷಮೆ, ಕರುಣೆ ಮತ್ತು ಉಪಜೀವನವನ್ನು ಬೇಡಲು ಪ್ರೋತ್ಸಾಹಿಸಲಾಗಿದೆ. ಅವು ಒಳಿತುಗಳ ಸಂಗ್ರಹವಾಗಿವೆ.
ತಮ್ಮ ಸಮುದಾಯಕ್ಕೆ ಪ್ರಯೋಜನಕಾರಿಯಾದ ವಿಷಯಗಳನ್ನು ಕಲಿಸಲು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತೋರಿಸಿದ ಸಹಾನುಭೂತಿಯನ್ನು ತಿಳಿಸಲಾಗಿದೆ.
ಪೂರ್ಣ ಶುದ್ಧತೆಯನ್ನು ಪಡೆಯುವುದಕ್ಕಾಗಿ ಕರುಣೆಯನ್ನು ಕ್ಷಮೆಯ ನಂತರ ಪ್ರಸ್ತಾಪಿಸಲಾಗಿದೆ. ಕ್ಷಮೆ ಎಂದರೆ ಪಾಪಗಳನ್ನು ಮರೆಮಾಚುವುದು, ಅಳಿಸುವುದು ಮತ್ತು ನರಕದಿಂದ ರಕ್ಷಣೆ ಪಡೆಯುವುದು. ಕರುಣೆ ಎಂದರೆ ಒಳಿತುಗಳನ್ನು ಪಡೆಯುವುದು ಮತ್ತು ಸ್ವರ್ಗವನ್ನು ಪ್ರವೇಶಿಸುವುದು. ಇದೇ ಅತಿದೊಡ್ಡ ವಿಜಯ.

Attribution

[رواه مسلم]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...