ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್ಗಳ (ಉದ್ದೇಶಗಳ) ಮೇಲೆ ಅವಲಂಬಿತವಾಗಿವೆ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಗೂ ಅವನು ಉದ್ದೇಶಿಸಿದ್ದು ಮಾತ್ರ ಸಿಗುತ್ತದೆ
Choose an available translation of this Hadeeth
Hadeeth text
ಅಮೀರುಲ್-ಮುಅ್ಮಿನೀನ್ (ಸತ್ಯವಿಶ್ವಾಸಿಗಳ ನಾಯಕ) ಅಬೂ ಹಫ್ಸ್ ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ: "ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್ಗಳ (ಉದ್ದೇಶಗಳ) ಮೇಲೆ ಅವಲಂಬಿತವಾಗಿವೆ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಗೂ ಅವನು ಉದ್ದೇಶಿಸಿದ್ದು ಮಾತ್ರ ಸಿಗುತ್ತದೆ. ಆದ್ದರಿಂದ, ಯಾರ ಹಿಜ್ರತ್ (ವಲಸೆ) ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಾಗಿ ಆಗಿದೆಯೋ, ಅವನ ಹಿಜ್ರತ್ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಾಗಿಯೇ (ಪರಿಗಣಿಸಲಾಗುತ್ತದೆ). ಯಾರ ಹಿಜ್ರತ್ ಅವನು ಗಳಿಸಬೇಕೆಂದಿರುವ ಲೌಕಿಕ ಪ್ರಯೋಜನಕ್ಕಾಗಿ, ಅಥವಾ ಅವನು ವಿವಾಹವಾಗಬೇಕೆಂದಿರುವ ಮಹಿಳೆಗಾಗಿ ಆಗಿದೆಯೋ, ಅವನ ಹಿಜ್ರತ್ ಅವನು ಯಾವುದಕ್ಕಾಗಿ ವಲಸೆ ಹೋದನೋ ಅದಕ್ಕಾಗಿಯೇ (ಪರಿಗಣಿಸಲಾಗುತ್ತದೆ)".
Explanation
ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉದ್ದೇಶವು ಬಾಹ್ಯವಾಗಿ ನೋಡುವಾಗ ಒಂದೇ ರೂಪದಲ್ಲಿದ್ದರೂ ಸಹ ಅದು ಒಳಗೊಂಡಿರುವ ಪರಿಣಾಮವನ್ನು ಒಂದು ಉದಾಹರಣೆಯ ಮೂಲಕ ವಿವರಿಸುತ್ತಾರೆ. ಅವರು ವಿವರಿಸುವಂತೆ, ಒಬ್ಬ ವ್ಯಕ್ತಿ ಅಲ್ಲಾಹನ ಸಂಪ್ರೀತಿಯನ್ನು ಉದ್ದೇಶಿಸಿ ತನ್ನ ಊರನ್ನು ತೊರೆದು ವಲಸೆ (ಹಿಜ್ರ) ಹೋದರೆ ಅದು ಧಾರ್ಮಿಕ ರೂಪದಲ್ಲಿರುವ ಸ್ವೀಕಾರಯೋಗ್ಯ ವಲಸೆಯಾಗಿದ್ದು ಅವನ ಉದ್ದೇಶದ ಪ್ರಾಮಾಣಿಕತೆಯಿಂದಾಗಿ ಪ್ರತಿಫಲಾರ್ಹವಾಗುತ್ತದೆ. ಆದರೆ ಒಬ್ಬ ವ್ಯಕ್ತಿ ತನ್ನ ವಲಸೆಯ (ಹಿಜ್ರ) ಮೂಲಕ ಹಣ ಸಂಪಾದಿಸುವುದು, ಸ್ಥಾನಮಾನವನ್ನು ಪಡೆಯುವುದು, ವ್ಯಾಪಾರ ಮಾಡುವುದು, ವಿವಾಹವಾಗುವುದು ಮುಂತಾದ ಭೌತಿಕ ಲಾಭವನ್ನು ಉದ್ದೇಶಿಸಿದರೆ, ಅವನು ತನ್ನ ವಲಸೆಯ ಮೂಲಕ ಅವನು ಉದ್ದೇಶಿಸಿದ ಲಾಭವನ್ನಲ್ಲದೆ ಬೇರೇನನ್ನೂ ಪಡೆಯುವುದಿಲ್ಲ. ಹಿಜ್ರ ಮಾಡಿದ್ದಕ್ಕಾಗಿ ಅವನಿಗೆ ಯಾವುದೇ ಪ್ರತಿಫಲ ಸಿಗುವುದಿಲ್ಲ.
Benefits
ಅಲ್ಲಾಹನ ಸಾಮೀಪ್ಯ ಪಡೆಯುವುದಕ್ಕಾಗಿ ಮಾಡಲಾಗುವ ಕರ್ಮಗಳನ್ನು (ಸತ್ಕರ್ಮಗಳನ್ನು) ಅಲ್ಲಾಹನ ಸಾಮೀಪ್ಯವನ್ನು ಉದ್ದೇಶಿಸದೆ ಕೇವಲ ರೂಢಿಯಾಗಿ (ಯಾಂತ್ರಿಕವಾಗಿ) ನಿರ್ವಹಿಸಿದರೆ, ಆ ಕರ್ಮಗಳು ಪ್ರತಿಫಲಾರ್ಹವಾಗುವುದಿಲ್ಲ.
ನಿಯ್ಯತ್ (ಉದ್ದೇಶ) ನ ಮೂಲಕ ಆರಾಧನೆಗಳನ್ನು ಪರಸ್ಪರ ಬೇರ್ಪಡಿಸಲಾಗುತ್ತದೆ ಮತ್ತು ಹಾಗೆಯೇ ಆರಾಧನೆಗಳನ್ನು (ದೈನಂದಿನ) ಅಭ್ಯಾಸಗಳಿಂದಲೂ ಬೇರ್ಪಡಿಸಲಾಗುತ್ತದೆ.
Attribution
Categories
Share hadeeth
Sharing options · 0 Total shares

