ನಾನು ನಿಮ್ಮಿಂದ ಆಣೆ ಮಾಡಿಸಿದ್ದು ನಿಮ್ಮ ಮೇಲೆ ಅಪವಾದ ಹೊರಿಸುವುದಕ್ಕಲ್ಲ. ಬದಲಿಗೆ, ಸರ್ವಶಕ್ತನಾದ ಅಲ್ಲಾಹು ದೇವದೂತರ ಸಮ್ಮುಖದಲ್ಲಿ ನಿಮ್ಮ ಬಗ್ಗೆ ಹೇಳಿ ಹೆಮ್ಮೆಪಡುತ್ತಿದ್ದಾನೆಂದು ಜಿಬ್ರೀಲ್ ಬಂದು ನನಗೆ ತಿಳಿಸಿದರು
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮಸೀದಿಯಲ್ಲಿ ವೃತ್ತಾಕಾರದಲ್ಲಿ ಕುಳಿತಿರುವ ಜನರ ಬಳಿಗೆ ಹೋಗಿ ಮುಆವಿಯಾ ಕೇಳಿದರು: "ನೀವು ಇಲ್ಲಿ ಕುಳಿತುಕೊಳ್ಳಲು ಕಾರಣವೇನು?" ಅವರು ಉತ್ತರಿಸಿದರು: "ನಾವು ಅಲ್ಲಾಹನನ್ನು ಸ್ಮರಿಸಲು ಕುಳಿತಿದ್ದೇವೆ." ಅವರು ಕೇಳಿದರು: "ಅಲ್ಲಾಹನಾಣೆಗೂ ನೀವ…

