ನಾನು ಒಂದು ಮಾತನ್ನು ಬಲ್ಲೆ. ಅವನೇನಾದರೂ ಅದನ್ನು ಹೇಳಿದರೆ, ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ. ಅವನು ‘ಅಊದು ಬಿಲ್ಲಾಹಿ ಮಿನಶ್ಶೈತಾನ್’ ಎಂದು ಹೇಳಿದರೆ ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ
ಸುಲೈಮಾನ್ ಬಿನ್ ಸುರದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕುಳಿತಿದ್ದೆ. ಆಗ ಅಲ್ಲಿ ಇಬ್ಬರು ಪರಸ್ಪರ ನಿಂದಿಸುತ್ತಿದ್ದರು. ಅವರಲ್ಲೊಬ್ಬನ ಮುಖ ಕೆಂಪಾಯಿತು ಮತ್ತು ಅವನ ಕುತ್ತಿಗೆಯ ರಕ್ತನಾಳಗಳು ಊದಿಕೊಂಡವು. ಆಗ ಪ್ರವಾ…

